ಜೀವನವೆಂಬುದು ಕಠಿಣ ಸತ್ಯ. ಧೈರ್ಯವಾಗಿ ಅದನ್ನು ಎದುರಿಸಿ. ನಿಮ್ಮ ಮಾರ್ಗದಲ್ಲಿ ಮುಂದುವರೆಯಿರಿ. ಅದು ಅಭೇದ್ಯವಾಗಿರಬಹುದು. ಆದರೆ ಆತ್ಮ ಅದಕ್ಕಿಂತ ಬಲಯುತವಾದುದು. – ಸ್ವಾಮಿ ವಿವೇಕಾನಂದ , 1 of 156, In list, 156 items
ಪ್ರತಿಯೊಬ್ಬ ವ್ಯಕ್ತಿಯೂ, ಪ್ರತಿಯೊಂದು ರಾಷ್ಟ್ರವೂ ಶ್ರೇಷ್ಠತೆಯನ್ನು ಪಡೆಯಲು ಮೂರು ಸಂಗತಿಗಳು ಅವಶ್ಯಕ: 1.ಒಳಿತಿನ ಶಕ್ತಿಯಲ್ಲಿ ದೃಢನಂಬಿಕೆ 2.ಮಾತ್ಸರ್ಯ ಹಾಗೂ ಅಪನಂಬಿಕೆಗಳಿಲ್ಲದಿರುವಿಕೆ 3.ಒಳ್ಳೆಯವರಾಗಲು, ಒಳಿತನ್ನು ಮಾಡಲು ಪ್ರಯತ್ನಿಸುವವರಿಗೆ ಸಹಾಯ ಮಾಡುವಿಕೆ. – ಸ್ವಾಮಿ ವಿವೇಕಾನಂದ , 2 of 156
ಪರಹಿತಕ್ಕಾಗಿ ನಿಮ್ಮ ಜೀವನವನ್ನು ಮುಡಿಪಾಗಿಡಿ. ನೀವು ತ್ಯಾಗಜೀವನವನ್ನು ಆರಿಸಿಕೊಳ್ಳುವುದಾದರೆ ಸೌಂದರ್ಯ, ಹಣ, ಅಧಿಕಾರಗಳ ಕಡೆ ತಿರುಗಿಯೂ ನೋಡಬೇಡಿ. – ಸ್ವಾಮಿ ವಿವೇಕಾನಂದ , 3 of 156
ನಮಗೆ ನಾವೇ ಕೇಡನ್ನುಂಟುಮಾಡಿಕೊಳ್ಳದಿದ್ದರೆ, ಜಗತ್ತಿನ ಯಾವ ಶಕ್ತಿಯೂ ನಮಗೆ ಕೇಡನ್ನುಂಟುಮಾಡಲಾರದು ಎಂಬುದು ನಿಶ್ಚಯ. – ಸ್ವಾಮಿ ವಿವೇಕಾನಂದ , 4 of 156
ಮೊದಲು ಚಾರಿತ್ರ್ಯವನ್ನು ಬೆಳೆಸಿ. ನೀವು ಮಾಡಬೇಕಾದ ಅತ್ಯುನ್ನತ ಕರ್ತವ್ಯ ಇದು. – ಸ್ವಾಮಿ ವಿವೇಕಾನಂದ
ನಿಮ್ಮೊಬ್ಬರ ಮೇಲೆಯೇ ಇಡೀ ಕೆಲಸವೂ ಬಿದ್ದಿದೆಯೇನೋ ಎಂಬಂತೆ ನೀವು ಪ್ರತಿಯೊಬ್ಬರೂ ಕೆಲಸ ಮಾಡಿ. ಐವತ್ತಕ್ಕೂ ಹೆಚ್ಚು ಶತಮಾನಗಳು ನಿಮ್ಮನ್ನು ನೋಡುತ್ತ ನಿಂತಿವೆ. ಭಾರತದ ಭವಿಷ್ಯ ನಿಮ್ಮನ್ನು ಅವಲಂಬಿಸಿದೆ. ಕೆಲಸಮಾಡಿಕೊಂಡು ಹೋಗಿ. – ಸ್ವಾಮಿ ವಿವೇಕಾನಂದ , 6 of 156
ವಿಕಾಸವೇ ಜೀವನ ಸಂಕೋಚವೇ ಮರಣ. ಪ್ರೇಮವೆಲ್ಲಾ ವಿಕಾಸ ಸ್ವಾರ್ಥವೆಲ್ಲಾ ಸಂಕೋಚ ಆದುದರಿಂದ ಪ್ರೇಮವೇ ಬದುಕಿನ ಧರ್ಮ. – ಸ್ವಾಮಿ ವಿವೇಕಾನಂದ , 7 of 156
ಇತರರಿಗೆ ತಿಳಿಯದೆ ಅವರನ್ನು ನಿಂದಿಸುವುದು ಮಹಾಪರಾಧ ಎಂಬುದನ್ನು ತಿಳಿಯಿರಿ. ಇದನ್ನು ನೀವು ಸಂಪೂರ್ಣ ತ್ಯಜಿಸಬೇಕು. – ಸ್ವಾಮಿ ವಿವೇಕಾನಂದ , 8 of 156
ಪ್ರಾಣಿಸಹಜ ವ್ಯಕ್ತಿಯನ್ನು ಮನುಷ್ಯನನ್ನಾಗಿಸಿ, ಮನುಷ್ಯನನ್ನು ದೇವರನ್ನಾಗಿಸುವ ಭಾವನೆಯೇ ಧರ್ಮ. – ಸ್ವಾಮಿ ವಿವೇಕಾನಂದ , 9 of 156
ಬುದ್ಧಿ ಶ್ರೇಷ್ಠವಾದುದು ನಿಜ. ಆದರ ಕಾರ್ಯವ್ಯಾಪ್ತಿ ಸೀಮಿತವಾದುದು. ಸ್ಫೂರ್ತಿ ಉಂಟಾಗುವುದು ಹೃದಯದ ಮೂಲಕ ಹೃದಯವೇ ಸ್ಫೂರ್ತಿಯ ಮೂಲ. – ಸ್ವಾಮಿ ವಿವೇಕಾನಂದ , 10 of 156
ನಿಮ್ಮ ಪಾಲಿಗೆ ಬಂದ ಕರ್ತವ್ಯವನ್ನು ಮಾಡಿ ನೀವು ಶುದ್ಧ ಚಾರಿತ್ರ್ಯವನ್ನು ರೂಢಿಸಿಕೊಳ್ಳಬೇಕು. ಕರ್ತವ್ಯವನ್ನು ಮಾಡಿದರೆ ಕರ್ತವ್ಯಭಾರದಿಂದ ಪಾರಾಗುತ್ತೇವೆ. – ಸ್ವಾಮಿ ವಿವೇಕಾನಂದ , 11 of 156
ಸತ್ಯನಿಷ್ಠೆ, ಪವಿತ್ರತೆ ಮತ್ತು ನಿಸ್ವಾರ್ಥತೆ ಈ ಮೂರು ಯಾರಲ್ಲಿರುತ್ತದೆಯೋ ಅವರನ್ನು ಈ ಜಗತ್ತಿನ ಯಾವ ಶಕ್ತಿಯೂ ನಿಗ್ರಹಿಸಲಾರದು. ಇವುಗಳಿಂದ ಸಂಪನ್ನನಾದವನು ಇಡೀ ಜಗತ್ತಿನ ವಿರೋಧವನ್ನೇ ಎದುರಿಸಬಲ್ಲ. – ಸ್ವಾಮಿ ವಿವೇಕಾನಂದ , 12 of 156
ಯಾರಿಗೆ ತನ್ನಲ್ಲಿ ತನಗೇ ನಂಬಿಕೆಯಿಲ್ಲವೋ ಅವನು ನಾಸ್ತಿಕ. ಹಳೆಯ ಧರ್ಮಗಳು ಹೇಳಿದವು, ದೇವರನ್ನು ನಂಬದವನು ನಾಸ್ತಿಕ ಎಂದು. ಹೊಸ ಧರ್ಮವು ಹೇಳುತ್ತದೆ, ಯಾರಿಗೆ ತನ್ನಲ್ಲಿ ನಂಬಿಕೆಯಿಲ್ಲವೋ ಅವನು ನಾಸ್ತಿಕ ಎಂದು. – ಸ್ವಾಮಿ ವಿವೇಕಾನಂದ , 13 of 156
ಆದರ್ಶದಿಂದ ಕೂಡಿದ ವ್ಯಕ್ತಿ ಒಂದು ಸಾವಿರ ತಪ್ಪುಗಳನ್ನು ಮಾಡಿದರೆ, ಆದರ್ಶವಿಲ್ಲದ ವ್ಯಕ್ತಿಯು ಐವತ್ತು ಸಾವಿರ ತಪ್ಪುಗಳನ್ನು ಮಾಡುತ್ತಾನೆ. ಆದ್ದರಿಂದ ಆದರ್ಶವನ್ನು ಇಟ್ಟುಕೊಳ್ಳುವುದು ಒಳ್ಳೆಯದು. – ಸ್ವಾಮಿ ವಿವೇಕಾನಂದ , 14 of 156
ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ. – ಸ್ವಾಮಿ ವಿವೇಕಾನಂದ , 15 of 156
ನಿಮಗಾಗಿ ಏನನ್ನೂ ಬಯಸಬೇಡಿ. ಎಲ್ಲವನ್ನೂ ಇತರರಿಗಾಗಿ ಮಾಡಿ. ಭಗವಂತನಲ್ಲೇ ಇರುವುದು ಅವನಲ್ಲೇ ಬಾಳುವುದು, ಚಲಿಸುವುದು ಎಂದರೆ ಇದೇ. – ಸ್ವಾಮಿ ವಿವೇಕಾನಂದ , 16 of 156
ಮಾನವನಲ್ಲಿ ಈಗಾಗಲೇ ಅಡಗಿರುವ ದೈವತ್ವವನ್ನು ಪ್ರಕಾಶಪಡಿಸುವುದೇ ಧರ್ಮ. – ಸ್ವಾಮಿ ವಿವೇಕಾನಂದ , 17 of 156
ಮನಸ್ಸನ್ನು ಶಕ್ತಿಯುತವೂ, ಶಿಸ್ತುಬದ್ದವೂ ಆಗಿಸುವುದರಲ್ಲಿಯೇ ಜ್ಞಾನದ ಮೌಲ್ಯವಿರುವುದು. – ಸ್ವಾಮಿ ವಿವೇಕಾನಂದ , 18 of 156
ಯಾರ ಸಹಾಯಕ್ಕೂ ಕಾದು ಕುಳಿತುಕೊಳ್ಳಬೇಡಿ. ಎಲ್ಲ ಮಾನವ ಸಹಾಯಕ್ಕಿಂತಲೂ ಭಗವಂತನು ಅನಂತಪಾಲು ಮಿಗಿಲಲ್ಲವೆ? – ಸ್ವಾಮಿ ವಿವೇಕಾನಂದ , 19 of 156
ಪ್ರತಿಯಾಗಿ ಏನನ್ನೂ ಬಯಸಬೇಡಿ. ಆದರೆ ನೀವು ಹೆಚ್ಚು ಕೊಟ್ಟಷ್ಟೂ ನಿಮಗೆ ಹೆಚ್ಚು ಬರುತ್ತದೆ. – ಸ್ವಾಮಿ ವಿವೇಕಾನಂದ , 20 of 156
ಹೇಡಿಗಳು ಮಾತ್ರ, ಬಲಹೀನರು ಮಾತ್ರ ಪಾಪವನ್ನು ಮಾಡುವುದು ಮತ್ತು ಸುಳ್ಳನ್ನು ಹೇಳುವುದು ಎಂಬುದನ್ನು ನೆನಪಿನಲ್ಲಿಡಿ. ಧೀರರು ಯಾವಾಗಲೂ ನೀತಿವಂತರಾಗಿರುತ್ತಾರೆ. ಧೀರರಾಗಿ, ನೀತಿವಂತರಾಗಿ , ಸಹಾನುಭೂತಿಯುಳ್ಳವರಾಗಿ. – ಸ್ವಾಮಿ ವಿವೇಕಾನಂದ , 21 of 156
ಧರ್ಮದ ರಹಸ್ಯವಿರುವುದು ಸಿದ್ಧಾಂತಗಳಲ್ಲಲ್ಲ. ಅದರ ಅನುಷ್ಠಾನದಲ್ಲಿ. ಒಳ್ಳೆಯವರಾಗಿರುವುದು, ಒಳ್ಳೆಯದನ್ನು ಮಾಡುವುದು –ಇದೇ ಧರ್ಮದ ಸರ್ವಸ್ವ. – ಸ್ವಾಮಿ ವಿವೇಕಾನಂದ , 22 of 156
ಜೀವನಾವಧಿ ಅಲ್ಲ, ಪ್ರಾಪಂಚಿಕ ವಿಷಯಗಳೆಲ್ಲ ಕ್ಷಣಿಕ. ಆದರೆ ಯಾರು ಇತರರಿಗಾಗಿ ಬಾಳುತ್ತಾರೋ ಅವರೇ ನಿಜವಾಗಿ ಬಾಳುತ್ತಾರೆ. ಉಳಿದವರು ಜೀವನ್ ಮೃತರು. – ಸ್ವಾಮಿ ವಿವೇಕಾನಂದ , 23 of 156
ಉನ್ನತ ಆಲೋಚನೆಗಳಿಂದ, ಅತ್ಯುನ್ನತ ಆದರ್ಶಗಳಿಂದ ನಿಮ್ಮ ಮಿದುಳನ್ನು ತುಂಬಿ ಅವುಗಳನ್ನು ಹಗಲಿರುಳೂ ನಿಮ್ಮ ಮುಂದಿರಿಸಿಕೊಳ್ಳಿ. ಇದರಿಂದ ಮಹತಕಾರ್ಯ ಉದ್ಭವಿಸುತ್ತದೆ. – ಸ್ವಾಮಿ ವಿವೇಕಾನಂದ , 24 of 156
ನೀವು ಯಶಸ್ಸನ್ನು ಪಡೆಯಲು ದೃಢ ಪ್ರಯತ್ನಬೇಕು, ಅಪಾರ ಇಚ್ಚಾಶಕ್ತಿ ಬೇಕು. ‘ನಾನು ಸಮುದ್ರವನ್ನೇ ಪಾನಮಾಡುತ್ತೇನೆ’, ಎಂದು ಪ್ರಯತ್ನಶೀಲನು ಹೇಳುತ್ತಾನೆ. ‘ನನ್ನ ಸಂಕಲ್ಪದ ಮುಂದೆ ಪರ್ವತಗಳೇ ಪುಡಿಪುಡಿಯಾಗುತ್ತವೆ’ ಎನ್ನುತ್ತಾನವನು. ಇಂತಹ ಶಕ್ತಿ ಯನ್ನೂ ಛಾತಿಯನ್ನೂ ಪಡೆಯಿರಿ ಕಷ್ಟಪಟ್ಟು ದುಡಿಯಿರಿ, ನೀವು ಗುರಿ ಸೇರುವುದು ನಿಶ್ಚಯ. – ಸ್ವಾಮಿ ವಿವೇಕಾನಂದ , 25 of 156
ಎದ್ದೇಳಿ ಕಾರ್ಯೋನ್ಮುಖರಾಗಿ, ಈ ಜೀವನವಾದರೂ ಎಷ್ಟು ಕಾಲ? ನೀವು ಈ ಜಗತ್ತಿಗೆ ಬಂದ ಮೇಲೆ ಏನಾದರೂ ಗುರುತನ್ನು ಬಿಟ್ಟು ಹೋಗಿ, ಅದಿಲ್ಲದಿದ್ದರೆ ನಿಮಗೂ ಮರಕಲ್ಲುಗಳಿಗೂ ಏನು ವೆತ್ಯಾಸ? ಅವೂ ಅಸ್ತಿತ್ವಕ್ಕೆ ಬರುತ್ತವೆ, ನಶಿಸಿ ನಿರ್ನಾಮವಾಗುತ್ತವೆ. – ಸ್ವಾಮಿ ವಿವೇಕಾನಂದ , 26 of 156
ಈ ಪ್ರಪಂಚ ಒಂದು ದೊಡ್ಡ ಗರಡಿ ಮನೆ. ನಾವಿಲ್ಲಿ ಬಲಿಷ್ಠರಾಗುವುದಕ್ಕೆ ಬಂದಿದ್ದೇವೆ. – ಸ್ವಾಮಿ ವಿವೇಕಾನಂದ , 27 of 156
ನಮಗೆ ತ್ಯಾಗ ಮಾಡುವ ಧೈರ್ಯ ಬೇಕಾದರೆ ನಾವು ಉದ್ವೇಗವಶರಾಗಕೂಡದು. ಉದ್ವೇಗ ಕೇವಲ ಪ್ರಾಣಿಗಳಿಗೆ ಸೇರಿದ್ದು. ಪ್ರಾಣಿಗಳು ಸಂಪೂರ್ಣವಾಗಿ ಉದ್ವೇಗದ ಅಧೀನದಲ್ಲಿರುವುವು. – ಸ್ವಾಮಿ ವಿವೇಕಾನಂದ , 28 of 156
ಈ ಜಗತ್ತಿನ ಇತಿಹಾಸ ಆತ್ಮಶ್ರದ್ಧೆಯನ್ನು ಹೊಂದಿದ್ದ ಕೆಲವೇ ವ್ಯಕ್ತಿಗಳ ಇತಿಹಾಸ. ಆ ಶ್ರದ್ಧೆ ಅಂತರಂಗದ ದಿವ್ಯತೆಯನ್ನು ಬಡಿದೆಬ್ಬಿಸುತ್ತದೆ. ಆಗ ನೀವೇನನ್ನು ಬೇಕಾದರೂ ಸಾಧಿಸಬಲ್ಲಿರಿ. – ಸ್ವಾಮಿ ವಿವೇಕಾನಂದ , 29 of 156
ನೀವು ದ್ವೇಷ ಮತ್ತು ಅಸೂಯೆಗಳನ್ನು ಹೊರಸೂಸಿದರೆ ಅವುಗಳು ಚಕ್ರಬಡ್ಡಿ ಸಮೇತ ನಿಮಗೇ ಹಿಂತಿರುಗುತ್ತವೆ. ಯಾವು ಶಕ್ತಿಯೂ ಅದನ್ನು ತಡೆಯಲಾರದು. ಒಮ್ಮೆ ನೀವು ಅವುಗಳನ್ನು ಚಲಿಸುವಂತೆ ಮಾಡಿದರೆ ಅದರ ದುಷ್ಪರಿಣಾಮವನ್ನು ನೀವು ಅನುಭವಿಸಲೇಬೇಕು. ನೀವಿದನ್ನು ನೆನಪಿನಲ್ಲಿಟ್ಟರೆ ದುಷ್ಕಾರ್ಯಗಳಿಂದ ಪಾರಾಗಬಹುದು. – ಸ್ವಾಮಿ ವಿವೇಕಾನಂದ , 30 of 156
ನಮ್ಮ ದುಃಖಗಳಿಗೆಲ್ಲ ನಾವೇ ಜವಾಬ್ಧಾರರು. ಮತ್ತಾರೂ ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ನಾವೇ. – ಸ್ವಾಮಿ ವಿವೇಕಾನಂದ , 31 of 156
ವತ್ಸ, ಪ್ರೀತಿಗೆ ಸೋಲೆಂಬುದಿಲ್ಲ ಇಂದೋ ನಾಳೆಯೋ ಅಥವಾ ಯುಗಾಂತರವೋ ಸತ್ಯ ಗೆದ್ದೇ ತೀರುವುದು. ಪ್ರೀತಿ ಖಂಡಿತ ಜಯ ಗಳಿಸುತ್ತದೆ. ನಮ್ಮ ಮಾನವಬಂಧುಗಳನ್ನು ನೀವು ಪ್ರೀತಿಸುತ್ತೀರೇನು? – ಸ್ವಾಮಿ ವಿವೇಕಾನಂದ , 32 of 156
ಎಲ್ಲವನ್ನೂ ದೂರ ಎಸೆಯಿರಿ. ನಿಮ್ಮ ಮುಕ್ತಿಯ ಬಯಕೆಯನ್ನು ಕೂಡ. ಇತರರಿಗೆ ಸಹಾಯಮಾಡಿ. – ಸ್ವಾಮಿ ವಿವೇಕಾನಂದ
ಯಾವುದಕ್ಕೂ ಅಂಜದಿರು ಅಧ್ಭುತ ಕಾರ್ಯವನ್ನೆಸಗುವೆ. ಭೀತಿಯೇ ಪ್ರಪಂಚದ ಎಲ್ಲ ದುಃಖಗಳಿಗೂ ಮಹತ್ಕಾರಣ. ನಮ್ಮ ದುರವಸ್ಥೆಗಳಿಗೆಲ್ಲಾ ಭೀತಿಯೇ ಕಾರಣ. ನಿರ್ಭೀತಿಯೇ ಕ್ಷಣಮಾತ್ರದಲ್ಲಿ ಸ್ವರ್ಗವನ್ನು ಸಾಧಿಸಿಕೊಡಬಲ್ಲದು. ಆದುದರಿಂದ ಎದ್ದು ನಿಲ್ಲು, ಜಾಗೃತನಾಗು ಮತ್ತು ಗುರಿ ಪ್ರಾಪ್ತವಾಗುವವರೆಗೂ ನಿಲ್ಲದಿರು. – ಸ್ವಾಮಿ ವಿವೇಕಾನಂದ , 34 of 156
ಮಹಾಕಾರ್ಯಗಳನ್ನು ಮಹಾತ್ಯಾಗದಿಂದ ಮಾತ್ರ ಸಾಧಿಸಲು ಸಾಧ್ಯ. ಅನ್ಯಾಯದ ಸ್ಥಾನವು ಅಭದ್ರವಾದುದು. ಅದರಿಂದ ಏಳಿಗೆ ಆಗದು. – ಸ್ವಾಮಿ ವಿವೇಕಾನಂದ , 35 of 156
ಏಳಿ ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ – ಸ್ವಾಮಿ ವಿವೇಕಾನಂದ , 36 of 156
ಅಹಂಕಾರವಿಲ್ಲದ ಮನುಷ್ಯ ಯಾವ ಧರ್ಮಗ್ರಂಥವನ್ನೂ ಓದದೆ, ಯಾವ ಮಂದಿರವನ್ನೂ ಪ್ರವೇಶಿಸದೆ ಮೋಕ್ಷ ಪಡೆಯಬಹುದು. – ಸ್ವಾಮಿ ವಿವೇಕಾನಂದ , 37 of 156
ಸತ್ಯಕ್ಕಾಗಿ ಯಾವುದನ್ನಾದರೂ ತ್ಯಾಗ ಮಾಡಿ ಆದರೆ ಯಾವುದಕ್ಕಾದರು ಸತ್ಯವನ್ನು ಮಾತ್ರ ತ್ಯಾಗ ಮಾಡಬೇಡಿ. – ಸ್ವಾಮಿ ವಿವೇಕಾನಂದ , 38 of 156
ಜ್ಞಾನಿಗಳು ತಮ್ಮ ದೋಷವನ್ನು ಮೊದಲು ಕಂಡುಕೊಳ್ಳುತ್ತಾರೆ – ಸ್ವಾಮಿ ವಿವೇಕಾನಂದ
ದಾನ ಮಾಡಿರಿ. ಆದರೆ ಅದರಿಂದ ಪ್ರತಿಫಲ ನಿರೀಕ್ಷಿಸಬೇಡಿ. ಅದು ತಾನಾಗಿಯೇ ವಾಪಸ್ ಬರಲಿದೆ. -ಸ್ವಾಮಿ ವಿವೇಕಾನಂದ. , 40 of 156
ಆತ್ಮವಿಶ್ವಾಸದಂತಹ ಮಿತ್ರ ಬೇರಿಲ್ಲ. ಇದು ಉನ್ನತಿಯ ಮೊದಲ ಮೆಟ್ಟಿಲು. ಆದ್ದರಿಂದ ಮೊದಲು ಆತ್ಮವಿಶ್ವಾಸವನ್ನು ಗಳಿಸಿಕೊಳ್ಳಬೇಕು. -ಸ್ವಾಮಿ ವಿವೇಕಾನಂದ , 41 of 156
ವಿವೇಕಿಯಾದವನು ಬೇರೆಯವರ ತಪ್ಪನ್ನು ಕಂಡು ತನ್ನಲ್ಲಿರುವ ತಪ್ಪನ್ನು ತಿದ್ದಿಕೊಳ್ಳುತ್ತಾನೆ. -ಸ್ವಾಮಿ ವಿವೇಕಾನಂದ , 42 of 156
ಏಳು ಎದ್ದೇಳು ನಿನಗಾಗಿ ಕಾಯುತ್ತಿದೆ ಒಂದು ಸುಂದರ ದಿನ . ಒಳ್ಳೆಯ ಗುರಿಯತ್ತ ನಡೆ .ನಿರ್ಧಿಷ್ಟತೆಯ ಜೊತೆ ಓಡು ಸಾಧನೆಗಳ ಜೊತೆ ಹಾರಾಡು ನಿನಗಾಗಿ ಕಾಯುತ್ತಿರುವ ಸುಂದರ ಬದುಕಿದೆ ಏಳು ಎದ್ದೇಳು – ಸ್ವಾಮಿ ವಿವೇಕಾನಂದ , 43 of 156
ನಿಜವಾದ ಶಿಕ್ಷಕನೆಂದರೆ ಮಕ್ಕಳ ಮಟ್ಟಕ್ಕೆ ಇಳಿದು ತನ್ನಾತ್ಮವನ್ನು ವಿದ್ಯಾರ್ಥಿಗಳ ಆತ್ಮಕ್ಕೆ ವರ್ಗಾಯಿಸುವವರು- ಸ್ವಾಮಿ ವಿವೇಕಾನಂದ , 44 of 156
ಕಾಲ ಕೆಟ್ಟಿತೆಂದು ಜನರು ಹೇಳುತ್ತಾರೆ. ಆದರೆ ಕಾಲ ಕೆಡುವುದಿಲ್ಲ, ಕೆಡುವುದು ಜನರ ನಡತೆ ಮತ್ತು ಆಚಾರ – ವಿಚಾರ ಮಾತ್ರ. – ಸ್ವಾಮಿ ವಿವೇಕಾನಂದ , 45 of 156
ಯಾವುದಕ್ಕೂ ಅಂಜದಿರಿ ಅದ್ಭುತ ಕಾರ್ಯವನ್ನೆಸಗುವೆ. ಭೀತಿಯೇ ಪ್ರಪಂಚದ ಎಲ್ಲ ದುಃಖಗಳಿಗೂ ಮಹತ್ಕಾರಣ. ನಮ್ಮ ದುರವಸ್ಥೆಗಳಿಗೆಲ್ಲ ಭೀತಿಯೇ ಕಾರಣ – ಸ್ವಾಮಿ ವಿವೇಕಾನಂದ , 46 of 156
ಸರಿಮಾಡಿಕೊಳ್ಳದೆ ಬಿಟ್ಟಂತಹ ತಪ್ಪುಗಳಿಗಿಂತ ಮಿಂಚಿದ ಆಪತ್ತು ಬೇರೇನು ಇಲ್ಲ. – ಸ್ವಾಮಿ ವಿವೇಕಾನಂದ , 47 of 156
ಒಂದು ಆದರ್ಶವನ್ನು, ಗುರಿಯನ್ನು ಕೈಗೆತ್ತಿಕೊಳ್ಳಿ. ಕೇವಲ ಆ ಗುರಿಯ ಬಗ್ಗೆ ಮಾತ್ರ ಯೋಚಿಸಿ, ಚಿಂತಿಸಿ. ನಿಮ್ಮ ಬದುಕನ್ನೇ ಅದಕ್ಕಾಗಿ ಮುಡಿಪಾಗಿಡಿ. ಆ ಗುರಿಯು ನಿಮ್ಮ ಬುದ್ಧಿ, ಮನಸ್ಸು, ಇಂದ್ರಿಯಗಳು, ನರ-ನಾಡಿಗಳನ್ನೆಲ್ಲ ವ್ಯಾಪಿಸಲಿ. ಬೇರೆಲ್ಲ ಆಲೋಚನೆಗಳನ್ನು ಬದಿಗಿಡಿ. ಇದೇ ಯಶಸ್ಸಿನ ಏಕಮಾತ್ರ ಸೂತ್ರ! – ಸ್ವಾಮಿ ವಿವೇಕಾನಂದ , 48 of 156
ನಮ್ಮಲ್ಲಿ ನಾವು ವಿಶ್ವಾಸ ಕಳೆದುಕೊಳ್ಳದಿರುವುದು ಮತ್ತು ನಮ್ಮನ್ನು ನಾವು ದ್ವೇಷಿಸದಿರುವುದೇ ನಮ್ಮ ಮೊದಲ ಕರ್ತವ್ಯ. ಮೊದಲು ನಮ್ಮ ಬಗ್ಗೆ ನಮಗೆ ನಂಬಿಕೆಯಿದ್ದಲ್ಲಿ ಮಾತ್ರ ಭಗವಂತನಲ್ಲಿ ನಂಬಿಕೆಯಿಡಲು ಸಾಧ್ಯ. ತನ್ನನ್ನೇ ನಂಬದವನು ಭಗವಂತನನ್ನು ಹೇಗೆ ತಾನೇ ನಂಬಲು ಸಾಧ್ಯ?! – ಸ್ವಾಮಿ ವಿವೇಕಾನಂದ , 49 of 156
ಮಹಾ ಮೂರ್ಖನೂ ಕೂಡ ತನ್ನ ಹೃದಯಕ್ಕೆ ಒಪ್ಪಿಗೆಯಾಗುವಂತಹ ಕಾರ್ಯವನ್ನು ಸಾಧಿಸಬಲ್ಲ ಆದರೆ ಯಾರು ಯಾವುದೇ ಕೆಲಸವನ್ನಾದರೂ ತನಗೆ ರುಚಿಸುವಂತೆ ಪರಿವರ್ತಿಸಬಲ್ಲನೋ ಅವನೇ ಬುದ್ಧಿವಂತನು. – ಸ್ವಾಮಿ ವಿವೇಕಾನಂದ , 50 of 156
ತಮ್ಮನ್ನು ಸರಿಪಡಿಸಿಕೊಂಡವರು ಪ್ರಪಂಚವನ್ನು ಸರಿಪಡಿಸಿದವರಾಗುತ್ತಾರೆ. – ಸ್ವಾಮಿ ವಿವೇಕಾನಂದ , 51 of 15
ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಬಯಲಿಗೆ ಬರುತ್ತದೆ – ಸ್ವಾಮಿ ವಿವೇಕಾನಂದ , 52 of 156
ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು – ಸ್ವಾಮಿ ವಿವೇಕಾನಂದ , 53 of 156
ಇದೊಂದು ದೊಡ್ಡ ಸತ್ಯ ಶಕ್ತಿಯೇ ಜೀವನ, ದುರ್ಬಲತೆಯೇ ಮರಣ ಶಕ್ತಿಯೇ ಪರಮಾನಂದ, ಅಖಂಡಜೀವನ, ಅಮರತ್ವ. ದುರ್ಬಲತೆಯೇ ಅನವರತ ದುಃಖ, ತಳಮಳ, ದುರ್ಬಲತೆಯೇ ಮರಣ. – ಸ್ವಾಮಿ ವಿವೇಕಾನಂದ , 54 of 156
ನೀವು ಯಾವುದೇ ಕೆಲಸವನ್ನು ಮಾಡುವಾಗಲೂ ನಿಮ್ಮ ಮನಸ್ಸು ಹೃದಯ, ನಿಮ್ಮ ಸರ್ವಸ್ವವನ್ನೂ ಆಕೆಲಸಕ್ಕೆ ಕೊಡಿ. ನಾನೊಮ್ಮೆ ಒಬ್ಬ ಸಾಧು ಮಹಾತ್ಮನನ್ನು ನೋಡಿದ್ದೆ. ಆತ ಪೂಜೆ, ಧ್ಯಾನಗಳನ್ನು ಎಷ್ಟು ಏಕಾಗ್ರತೆ ಶ್ರದ್ಧೆಗಳಿಂದ ಮಾಡುತ್ತಿದ್ದನೋ ಅಷ್ಟೇ ಸಾವಧಾನದಿಂದ ತನ್ನ ಆಡುಗೆ ಮಾಡುವ ಹಿತ್ತಾಳೆ ಪಾತ್ರೆಗಳನ್ನು ಫಳ ಫಳನೆಹೊಳೆಯುವ ಚಿನ್ನದಂತೆ ತೊಳೆದಿಡುತ್ತಿದ್ದನು. – ಸ್ವಾಮಿ ವಿವೇಕಾನಂದ , 55 of 156
ಶಿಕ್ಷಣವೆಂದರೆ ಮೊದಲೇ ಮನುಷ್ಯನಲ್ಲಿ ಇರುವ ಪರಿಪೂರ್ಣತೆಯನ್ನು ಪ್ರಕಾಶಪಡಿಸುವುದು. – ಸ್ವಾಮಿ ವಿವೇಕಾನಂದ , 56 of 156